.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು ಗೊತ್ತಿಲ್ಲ ಎನ್ನುತ್ತಿದ್ದ ಧನ್ವೀರ್ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಹೇಳಿದ್ದಾರೆ. ಈಗ ಈ ಪ್ರಕರಣದಲ್ಲಿ ವಿಜಯಲಕ್ಷ್ಮೀ ಅವರು ತನಿಖೆ ಎದುರಿಸುವ ಸಾಧ್ಯತೆ ಇದೆ.