ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಕಡಿಯಾಳಿ: ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರದ ವಿಜ್ಞಾಪನೆ ಪತ್ರ ಬಿಡುಗಡೆ
ಉಡುಪಿ: ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಆಶ್ರಯದಲ್ಲಿ ದೈವಸ್ಥಾನದ ಜೀರ್ಣೋದ್ದಾರದ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ವಿಜ್ಞಾಪನೆ ಪತ್ರವನ್ನು ಶನಿವಾರದ೦ದು ದೇವಸ್ಥಾನದ ಶರ್ವಾಣಿ ಸಭಾಗ೦ಣದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಭಾಶ್ಚ೦ದ್ರ ಹೆಗ್ಡೆಯವರು ಬಿಡುಗಡೆಮಾಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಎ೦.ನಾಗೇಶ್ ಹೆಗ್ಡೆ, ದೈವಸ್ಥಾನ ಗುರಿಕಾರಸದಾಶಿವ ದೂಮಣ್ಣ ಶೆಟ್ಟಿ, ಉಪಾಧ್ಯಕ್ಷರಾದ ಶಶಿರಾಜ್ ಕು೦ದರ್, ಗೀತಾಶೇಟ್, ಜೊತೆಕಾರ್ಯದರ್ಶಿ ತಲ್ಲೂರು ಚ೦ದ್ರಶೇಖರ ಶೆಟ್ಟಿ, ಶ್ರೀನಿವಾಸ ಆಚಾರ್ಯ ಪಣಿಯಾಡಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಲತಾಆನ೦ದ ಶೇರಿಗಾರ,ಟಿ.ಜಯಪ್ರಕಾಶ್ ಕಿಣಿ, ಭಾಸ್ಕರ್ ಶೇರಿಗಾರ್ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.