.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”: ಡಿಕೆಶಿ​ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ತಂತ್ರ ಒಂದುಕಡೆಯಾದರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದ ಪ್ರತಿತಂತ್ರ ರೂಪಿಸುತ್ತಿದೆ.

ಈ ಮಧ್ಯೆ ಡಿ.ಕೆ. ಶಿವಕುಮಾರ್​ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”ವಾಗಿದೆ. ನಾನು ಆತ್ಮಸಾಕ್ಷಿಯನ್ನು ನಂಬುತ್ತೇನೆ ಎಂದಿದ್ದಾರೆ.

ನಾನು ಪಕ್ಷಕ್ಕೆ ಯಾವುದೇ ಮುಜುಗರವನ್ನುಂಟುಮಾಡಲು ಮತ್ತು ಪಕ್ಷವನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ, 2023 ರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ “ಅಧಿಕಾರ ಹಂಚಿಕೆ” ಒಪ್ಪಂದವನ್ನು ಉಲ್ಲೇಖಿಸಿ, ಆಡಳಿತ ಪಕ್ಷದೊಳಗೆ ಸಿಎಂ ಪಟ್ಟಕ್ಕಾಗಿ ಫೈಟ್ ತೀವ್ರಗೊಂಡಿದೆ.

ಪಕ್ಷ ಇದ್ದರೆ ನಾವೆಲ್ಲ, ಪಕ್ಷವನ್ನು ನಾನು ವೀಕ್ ಮಾಡುವುದಿಲ್ಲ. ಸಿದ್ದರಾಮಯ್ಯ ಬಜೆಟ್ ಮಂಡಿಸ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೂಡ ದುಡಿದಿದ್ದಾರೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿ ಹೇಳಿದ್ದಾರೆ.

“ನಾನು ನನ್ನನ್ನು ಸಿಎಂ ಮಾಡಿ ಅಂತ ಯಾರನ್ನೂ ಕೇಳಿಲ್ಲ. ಇದು ಐದು ಮತ್ತು ಆರು ಜನರ ನಡುವಿನ ರಹಸ್ಯ ಒಪ್ಪಂದ. ನಾನು ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಬಯಸುವುದಿಲ್ಲ. ನಾನು ನನ್ನ ಆತ್ಮಸಾಕ್ಷಿಯನ್ನು ನಂಬುತ್ತೇನೆ. ನಾವು ನಮ್ಮ ಆತ್ಮಸಾಕ್ಷಿಯೊಂದಿಗೆ ಕೆಲಸ ಮಾಡಬೇಕು. ಪಕ್ಷಕ್ಕೆ ಯಾವುದೇ ರೀತಿಯಲ್ಲಿ ಮುಜುಗರ ಉಂಟುಮಾಡಲು ಮತ್ತು ಅದನ್ನು ದುರ್ಬಲಗೊಳಿಸಲು ನಾನು ಬಯಸುವುದಿಲ್ಲ. ಪಕ್ಷ ಇದ್ದರೆ, ನಾವು” ಎಂದು ಡಿಕೆ ಶಿವಕುಮಾರ್ ಅವರು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.

ತಮ್ಮ ತವರು ಕ್ಷೇತ್ರ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರು ಹಿರಿಯ ನಾಯಕರು. ಅವರು ಪಕ್ಷಕ್ಕೆ ಆಸ್ತಿ. ಅವರು ಮುಖ್ಯಮಂತ್ರಿಯಾಗಿ 7.5 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ(ಹಿಂದಿನ ಅವಧಿ ಸೇರಿದಂತೆ).” ಸಿದ್ದರಾಮಯ್ಯ ಅವರು ಮುಂದಿನ ಬಜೆಟ್ ಅನ್ನು ಸಹ ಮಂಡಿಸುವುದಾಗಿ ಹೇಳಿದ್ದಾರೆ. ಮಂಡಿಸಲಿ ಎಂದರು.

No Comments

Leave A Comment