.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ ತೀರಿಸಿಕೊಂಡಿದೆ.

ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು 349 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ನೀಡಿದ 350 ರನ್ ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 332 ರನ್ ಗಳಿಗೆ ಆಲೌಟ್ ಆಗುವ ಮೂಲಕ 17 ರನ್ ಗಳಿಂದ ಸೋಲು ಅನುಭವಿಸಿದೆ.

ಆಫ್ರಿಕಾ ಪರ ಮ್ಯಾಥ್ಯೂ ಬ್ರೀಟ್ಜ್ಕೆ 72, ಟೋನಿ ಡಿ ಜೋರ್ಜಿ 39, ಡೆವಾಲ್ಡ್ ಬ್ರೆವಿಸ್ 37, ಮಾರ್ಕೊ ಜಾನ್ಸೆನ್ 70 ರನ್ ಬಾರಿಸಿದರು. ಭಾರತದ ಪರ ಕುಲದೀಪ್ ಯಾದವ್ 4, ಹರ್ಷಿತ್ ರಾಣಾ 3, ಅರ್ಶ್ ದೀಪ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ.

ಭಾರತದ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. 120 ಎಸೆತಗಳನ್ನು ಎದುರಿಸಿದ ಕೊಹ್ಲಿ, 7 ಸಿಕ್ಸರ್ ಮತ್ತು 11 ಬೌಂಡರಿಗಳ ಸಹಿತ 135 ರನ್ ಚಚ್ಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ ಶರ್ಮಾ 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 57 ರನ್ ಗಳಿಸಿದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 3 ಸಿಕ್ಸರ್ 2 ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರೆ, ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಪೇರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ದಕ್ಷಿಣ ಆಫ್ರಿಕಾ ಪರ ಮಾರ್ಕೋ ಜೇನ್ಸನ್, ಬರ್ಗರ್, ಬಾಶ್ ಮತ್ತು ಬಾರ್ಟ್ ಮನ್ ತಲಾ 2 ವಿಕೆಟ್ ಪಡೆದರು.

No Comments

Leave A Comment