ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಎಚ್ಚರ..ಎಚ್ಚರ: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ, ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ..!

ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೊಸ ನಿಯಮದಂತೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ, ಸಾಂಕ್ರಾಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುತ್ತದೆ. ಅವರಿಗೆ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ತೊಂದರೆ ಅಥವಾ ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಬಾರದು ಅಥವಾ ಆಹಾರವನ್ನು ನೀಡಲು ಪ್ರೇರೇಪಿಸಬಾರದು. ಪಾರಿವಾಳಗಳಿಗೆ ಆಹಾರವನ್ನು ನೀಡುವುದನ್ನು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಷರತ್ತುಗಳೊಂದಿಗೆ ಅನುಮತಿಸಲಾಗುತ್ತದೆ. ನಿಗದಿಪಡಿಸಿದ ಪ್ರದೇಶಗಳ ನಿರ್ವಹಣೆ ಮತ್ತು ನಿರ್ದೇಶನಗಳ ಅನುಸರಣೆಯ ಜವಾಬ್ದಾರಿಯನ್ನು ಕೆಲವು ಎನ್‌ಜಿಓ ವಹಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

No Comments

Leave A Comment