.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ದೆಹಲಿ: ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್! ವೀಸಾ ಸೇವೆ ಸ್ಥಗಿತ

ನವದೆಹಲಿ: ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದ ದೆಹಲಿ ಮತ್ತು ತ್ರಿಪುರಾ ರಾಯಭಾರ ಕೆಚೇರಿಗಳ ಮುಂದೆ ಪ್ರತಿಭಟನೆಗಳು ನಡೆಯುತ್ತಿದ್ದು, ಇದೀಗ ಪ್ರತಿಭಟನೆ ತೀವ್ರಗೊಂಡು ಪೊಲೀಸರ ಲಾಠಿ ಪ್ರಹಾರ ಕೂಡ ನಡೆದಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸೇರಿದ ನೂರಾರು ಕಾರ್ಯಕರ್ತರು ಮಂಗಳವಾರ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ ಹೆಚ್ಚಿನ ಭದ್ರತಾ ರಾಜತಾಂತ್ರಿಕ ವಲಯದಲ್ಲಿ ಅಡಚಣೆ ಉಂಟಾಯಿತು.

ಹಿಂದೂ ಯುವಕನ ಹತ್ಯೆ ಖಂಡಿಸಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರ ಹತ್ಯೆ ಸೇರಿದಂತೆ ಕೋಮು ಹಿಂಸಾಚಾರದ ಘಟನೆಗಳನ್ನು ಖಂಡಿಸಿ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿತ್ತು. ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಿ, ಕಾರ್ಯಾಚರಣೆಯ ಸುತ್ತಲೂ ಮೂರು ಪದರಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರು.

ಭಾರಿ ಭದ್ರತಾ ಉಪಸ್ಥಿತಿಯ ಹೊರತಾಗಿಯೂ, ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತಲು ಪ್ರಯತ್ನಿಸುತ್ತಿದ್ದಂತೆ ಪೊಲೀಸರು ಜನಸಮೂಹವನ್ನು ನಿಯಂತ್ರಿಸುವಲ್ಲಿ ಅಡಚಣೆ ಎದುರಿಸಿದರು. ಪ್ರತಿಭಟನಾಕಾರರು ಬಾಂಗ್ಲಾದೇಶ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಕೂಗಿದರು ಮತ್ತು ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಬ್ಯಾನರ್‌ಗಳು ಮತ್ತು ಫಲಕಗಳನ್ನು ಪ್ರದರ್ಶಿಸಿದರು.

ಲಾಠಿ ಚಾರ್ಜ್

ಇನ್ನು ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಅರಿತ ಭದ್ರತಾ ಸಿಬ್ಬಂದಿ ಮೊದಲು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಹಲವು ಪ್ರತಿಭಟನಾಕಾರರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇನ್ನು ಕಚೇರಿ ಅವರಣದಲ್ಲಿನ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರ ಕಚೇರಿ ವೀಸಾ ಸೇವೆ ಸ್ಥಗಿತಗೊಳಿಸಿದೆ. ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಜತಾಂತ್ರಿಕ ಕಚೇರಿ ಪ್ರಕಟಣೆ ಹೊರಡಿಸಿದ್ದು, ‘ಅನಿವಾರ್ಯ ಕಾರಣಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ತಿಳಿಸಿದೆ.

ಭಾನುವಾರ ನಡೆದ ಪ್ರತಿಭಟನೆ ನಂತರ ತ್ರಿಪುರದಲ್ಲಿರುವ ರಾಜತಾಂತ್ರಿಕ ಕಚೇರಿ ಕೂಡ ಇದೇ ರೀತಿಯ ಪ್ರಕಟಣೆ ಹೊರಡಿಸಿದೆ. ಪಶ್ಚಿಮ ಬಂಗಾಳದ ಸಿರಿಗುರಿಯಲ್ಲಿರುವ ಖಾಸಗಿ ಸಂಸ್ಥೆಗಳು ಕೂಡ ವೀಸಾ ಸೇವೆಗಳನ್ನು ತಾತ್ಕಲಿಕವಾಗಿ ರದ್ದುಗೊಳಿಸಿವೆ.

ಬಾಂಗ್ಲಾದಲ್ಲಿರುವ ಭಾರತ ಹೈಕಮಿಷನರ್ ಕಚೇರಿ ಮುಂದೆಯೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಳೆದ ಗುರುವಾರದಿಂದಲೇ ವೀಸಾ ಸೇವೆಗಳನ್ನು ಭಾರತ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ

ಡಿ.12ರಂದು ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದೇಶದಲ್ಲಿ ಹೊಸದಾಗಿ ಪ್ರತಿಭಟನೆಗಳು ಭುಗಿಲೆದ್ದಿವೆ. ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹಾದಿ ಪ್ರಮುಖ ಪಾತ್ರ ವಹಿಸಿದ್ದರು.

ಹಾದಿ ಹತ್ಯೆಯಾದ ಬಳಿಕ ಬಾಂಗ್ಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಈ ವೇಳೆ ಹಿಂದು ವ್ಯಕ್ತಿ ದೀಪು ಚಂದ್ರದಾಸ್‌ ಎಂಬುವರನ್ನು ಗುಂಪೊಂದು ಬೆಂಕಿ ಹಚ್ಚಿ ಹತ್ಯೆ ಮಾಡಿತ್ತು. ಡಿ.21ರಂದು ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗಿಯಾದ ಮತ್ತೊಬ್ಬ ನಾಯಕ ಮೋತಲೆಬ್ ಸಿಕ್ದಾರ್ (42) ಹತ್ಯೆ ನಡೆದಿತ್ತು.

No Comments

Leave A Comment