....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ…

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ ಮೆರವಣಿಗೆ ಮೂಲಕ ರಥವನ್ನು ರಾಜಾಂಗಣಕ್ಕೆ ತರಲಾಯಿತು.


ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೈಭವದ ಮೆರವಣಿಗೆಯಲ್ಲಿ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳು, ಸಂಸ್ಕೃತ ಕಾಲೇಜು ತಂಡದಿಂದ ವೇದಘೋಷ, ಬಿರುದಾವಳಿ, ವಿವಿಧ ಬಗೆಯ ಆಕರ್ಷಕ ಸ್ತಬ್ಧ ಚಿತ್ರಗಳು, ವಿವಿಧ ಬಗೆಯ ಆಕರ್ಷಕ ವೇಷಗಳು, ನಾಸಿಕ್ ಬ್ಯಾಂಡ್ ಸೇರಿದಂತೆ ವಿವಿಧ ಬಗೆಯ ವಾದ್ಯ ತಂಡಗಳು, ಭಜನಾ ತಂಡಗಳು ಪಾಲ್ಗೊಂಡಿದ್ದರು.
ನಂತರ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀಗಳು ಹಾಗೂ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಕ್ಕೆ ಪುಷ್ಪಾರ್ಚನೆ ಮಾಡಿ ಆರತಿ ಬೆಳಗಿಸಿ ಶ್ರೀ ಕೃಷ್ಣನಿಗೆ ರಥವನ್ನು ಸಮರ್ಪಿಸಿದರು. ನಂತರ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

 

 

No Comments

Leave A Comment