....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಉಡುಪಿ ಶ್ರೀಕೃಷ್ಣಮಠದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ “ಕೋಟಿ ತುಳಸಿ” ಅರ್ಚನೆ ಕಾರ್ಯಕ್ರಮ ಸ೦ಪನ್ನ…
ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ “ಕೋಟಿ ತುಳಸಿ” ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾದರು.