.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖ‌ರ್ ಕಲ್ಮಾಡಿ ನಿಧನ

ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್‌ನಲ್ಲಿ ಬಿಜೆಪಿಯ ಮೊದಲ ನಗರಸಭಾ ಸದಸ್ಯೆಯಾಗಿ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿದ್ದ ಕಲ್ಮಾಡಿಯ ಇಂದಿರಾ ಶೇಖ‌ರ್ ಅವರು ನಿಧನರಾಗಿದ್ದಾರೆ.

ಇಂದಿರಾ ಶೇಖ‌ರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖ‌ರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

No Comments

Leave A Comment