....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ
ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.
ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಗುಂಪೊಂದು ಏಕಾಏಕಿ ದಾಳಿ ಮಾಡಿತ್ತು. ಸದ್ಯ ಹಲ್ಲೆ ವಿಡಿಯೋ ವೈರಲ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಸದ್ಯ ಈ ಬಗ್ಗೆ ಯಾರು ದೂರು ದಾಖಲಿಸಿಲ್ಲ.