.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬೆಂಗಳೂರು: ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ
ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್ ಒತ್ತಡ ಹೇರಿದ್ದರು.