.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ತುಮಕೂರು: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು!

ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಷ್ಪವತಿ ಕಾರಣ ಎನ್ನುವ ಶಂಕೆಯನ್ನು ಸುಚಿತ್ರಾಗೆ ಜ್ಯೋತಿಷಿ ಹೇಳಿದ್ದನು. ಆನ್​ಲೈನ್​​ನಲ್ಲಿ ಜ್ಯೋತಿಷಿಯನ್ನ ಸಂಪರ್ಕಿಸಿದ್ದ ಸುಚಿತ್ರಾ‌‌, ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ನಂಬಿದ್ದಳು ಎನ್ನಲಾಗಿದೆ.

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಹೇಳಿದ್ದ ಮಾತನ್ನು ನಂಬಿದ್ದ ಸುಚಿತ್ರಾ, ತಾಯಿ ಪುಷ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜ ಸಾವು ಎಂದು ಬಿಂಬಿಸಿ, ಅಂತ್ಯಕ್ರಿಯೆ ನಡೆಸಲು ಮಗಳು ಸುಚಿತ್ರಾ ಮುಂದಾಗಿದ್ದಳು.

ಆದರೆ, ಮೃತದೇಹದ ಸ್ಥಿತಿ ಹಾಗೂ ಸಂದರ್ಭಗಳನ್ನು ಗಮನಿಸಿದ ಗ್ರಾಮಸ್ಥರು ಇದು ಅಸಹಜ ಸಾವು ಅಲ್ಲ, ಕೊಲೆ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು. ಸದ್ಯ ಇದು ಸಹಜ ಸಾವಲ್ಲ ಕೊಲೆ ಎಂದು ಗೊತ್ತಾಗಿದ್ದು, ಘಟನೆ ಸಂಬಂಧಪಟ್ಟಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಚಿತ್ರಾ ಮತ್ತು ಆಕೆಯ ಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

No Comments

Leave A Comment