.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್​​ಗೆ ಕಾರು ಡಿಕ್ಕಿ; ಐವರು ಯುವಕರು ಸಾವು

ಬೆಂಗಳೂರು: ಹೊಸಕೋಟೆ ಬಳಿ ಎರಡು ದಿನಗಳ ಹಿಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃಕತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ  ಸಂಭವಿಸಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್ ಆರ್ ಟಿಸಿ ಬಸ್​​ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಐವರು ಯುವಕರು ಮೃತಪಟ್ಟಿದ್ದಾರೆ.

ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಿನಿಮೀಯ ಸ್ಟೈನಲ್ಲಿ ಕಾರು ಪಲ್ಟಿಯಾಗಿ 45 ಪ್ರಯಾಣಿಕರಿದ್ದ ಕೆಎಸ್​ಆರ್​ಟಿಸಿ ಬಸ್​​ಗೆ ಡಿಕ್ಕಿ ಹೊಡೆದಿದೆ. ಬಸ್​​ನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಐವರು ಯುವಕರು ಸಾವು

ಐವರು ಸ್ನೇಹಿತರು ಸೇರಿ ಇಂಡಿಕಾ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದರು. ತುಮಕೂರಿನಿಂದ ಬೆಂಗಳೂರಿನತ್ತ ಪ್ರಯಾಣ ಮಾಡುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಮುಂಭಾಗ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್ ಬಸ್​​ನಲ್ಲಿದ್ದ 42 ಮಂದಿ ಪ್ರಯಾಣಿಕರಿಗೆ, ಯಾವುದೇ ಅಪಾಯವಾಗಿಲ್ಲ.

ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರೂ ಮೃತಪಟ್ಟಿದ್ದಾರೆ.

ಅತಿ ವೇಗವೇ ದುರಂತಕ್ಕೆ ಕಾರಣ

ಮೃತರೆಲ್ಲರೂ ದೊಡ್ಡಬಳ್ಳಾಪುರ ಮೂಲದವರಾಗಿದ್ದು, ಸ್ನೇಹಿತರೆಲ್ಲಾ ಸೇರಿ ಔಟಿಂಗ್ ಹೋಗಿದ್ದರು ಎನ್ನಲಾಗಿದೆ. ಮನೆಯವರಿಗೆ ಹೇಳದೆ ಸ್ನೇಹಿತರ ಗ್ಯಾಂಗ್ ಜಾಲಿ ರೈಡ್​ ಹೋಗಿದ್ದು, ವಾಪಾಸ್​ ಆಗುವ ವೇಳೆ ದುರ್ಘಟನೆ ಸಂಭವಿಸಿದೆ. ಅತಿವೇಗವಾಗಿ ಕಾರು ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

No Comments

Leave A Comment