ಉಡುಪಿ ಜಿಲ್ಲಾ ಕಾ೦ಗ್ರೆಸ್ ನಲ್ಲಿ ಅಸಮಾಧಾನದ ಹೊಗೆ-ಒಬ್ಬರಿಗೆ ಒ೦ದೇ ಹುದ್ದೆ ನೀಡುವ ಬದಲು ಒಬ್ಬರಿಗೆ ಏರಡೆರಡು ಹುದ್ದೆ...ಕಾ೦ಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಅಸಮಧಾನ...

ಬ್ರಹ್ಮಾವರ: ಹಿರಿಯ ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.

ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

No Comments

Leave A Comment