....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಲಾರಿಗೆ ಕಾರು ಡಿಕ್ಕಿ: ಬೆಂಗಳೂರು ಸಮೀಪ ಭೀಕರ ಅಪಘಾತಕ್ಕೆ ಮೂವರು ಯುವಕರು ಸಾವು
ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.