.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ- ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ

ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ.

ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್‌ನಲ್ಲಿ ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದಾರೆ. ಮುಂಭಾಗ ಕುಳಿತಿದ್ದ ಸುಮಾರು 10 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಕಪುರಂ ಶಾಸಕ ಕಂದುಲ ನಾರಾಯಣ ರೆಡ್ಡಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಇನ್ನೂ ಘಟನೆ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತ ಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

No Comments

Leave A Comment