ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
ಮೈಸೂರು: ಹೊಸ್ತಿಲ ಮೇಲಿದ್ದ ದಾಸವಾಳ ನುಂಗಿ ಆರು ತಿಂಗಳ ಮಗು ಸಾವು
ಹುಣಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಒಣಗಿದ ದಾಸವಾಳದ ಹೂವನ್ನು ನುಂಗಿದ ಪರಿಣಾಮ, ಆರೂವರೆ ತಿಂಗಳ ಹಸುಗೂಸು ಉಸಿರುಗಟ್ಟಿ ಮೃತಪಟ್ಟಿರುವ ಅತ್ಯಂತ ದುರದೃಷ್ಟಕರ ಘಟನೆ ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು. ಶನಿವಾರ ಚಿನ್ಮಯಿ ತನ್ನ ಅಣ್ಣನೊಂದಿಗೆ ಮನೆಯ ಹೊಸಲಿನಲ್ಲಿ ಆಟವಾಡುತ್ತಿದ್ದನು.
ಈ ವೇಳೆ ಪೂಜೆಗೆ ಇರಿಸಲಾಗಿದ್ದ ಒಣಗಿದ ದಾಸವಾಳದ ಹೂವಿನ ತುಂಡನ್ನು ಮಗು ಬಾಯಿಗೆ ಹಾಕಿಕೊಂಡಿದೆ. ತನ್ನ ಅಣ್ಣ ಅದನ್ನು ಕಿತ್ತುಕೊಳ್ಳುತ್ತಾನೆಂಬ ಭಯದಿಂದ ಮಗು ಹೂವನ್ನು ನುಂಗಿದೆ.
ಹೂವು ಗಂಟಲಿನಲ್ಲಿ ಸಿಲುಕಿ ಮಗುವಿಗೆ ಉಸಿರಾಟದ ತೊಂದರೆ ಉಂಟಾಯಿತು. ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.