ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಮೈಸೂರು: ಹೊಸ್ತಿಲ ಮೇಲಿದ್ದ ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

ಹುಣಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಒಣಗಿದ ದಾಸವಾಳದ ಹೂವನ್ನು ನುಂಗಿದ ಪರಿಣಾಮ, ಆರೂವರೆ ತಿಂಗಳ ಹಸುಗೂಸು ಉಸಿರುಗಟ್ಟಿ ಮೃತಪಟ್ಟಿರುವ ಅತ್ಯಂತ ದುರದೃಷ್ಟಕರ ಘಟನೆ ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು. ಶನಿವಾರ ಚಿನ್ಮಯಿ ತನ್ನ ಅಣ್ಣನೊಂದಿಗೆ ಮನೆಯ ಹೊಸಲಿನಲ್ಲಿ ಆಟವಾಡುತ್ತಿದ್ದನು.

ಈ ವೇಳೆ ಪೂಜೆಗೆ ಇರಿಸಲಾಗಿದ್ದ ಒಣಗಿದ ದಾಸವಾಳದ ಹೂವಿನ ತುಂಡನ್ನು ಮಗು ಬಾಯಿಗೆ ಹಾಕಿಕೊಂಡಿದೆ. ತನ್ನ ಅಣ್ಣ ಅದನ್ನು ಕಿತ್ತುಕೊಳ್ಳುತ್ತಾನೆಂಬ ಭಯದಿಂದ ಮಗು ಹೂವನ್ನು ನುಂಗಿದೆ.

ಹೂವು ಗಂಟಲಿನಲ್ಲಿ ಸಿಲುಕಿ ಮಗುವಿಗೆ ಉಸಿರಾಟದ ತೊಂದರೆ ಉಂಟಾಯಿತು. ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

No Comments

Leave A Comment