.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

No Comments

Leave A Comment