....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!

ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು ಎಂದು ಹೇಳಲಾಗಿದೆ.

ಕೋರಮಂಗಲದ ಕಾಲೇಜಿನಲ್ಲಿ ಏಪ್ರಿಲ್ 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮಯದಲ್ಲಿ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಕೇಳಿದ ವಾರಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ವಿದ್ಯಾರ್ಥಿಯು ಅಂತಹ ಅನುಮತಿಸಲಾದ ಚಿಹ್ನೆಗಳನ್ನು ಧರಿಸಿದ್ದಕ್ಕಾಗಿ ತರಗತಿ ಕೊಠಡಿಗಳು, ಪರೀಕ್ಷಾ ಸಭಾಂಗಣಗಳು ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶವನ್ನು ನಿರಾಕರಿಸಬಾರದು. ಯಾವುದೇ ವಿದ್ಯಾರ್ಥಿಯನ್ನು ಅಂತಹ ಚಿಹ್ನೆಗಳನ್ನು ಧರಿಸಲು ಅಥವಾ ತೆಗೆದುಹಾಕಲು ಒತ್ತಾಯಿಸಲಾಗುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದರು.

ಉಡುಪಿಯಲ್ಲಿ ಶುರುವಾದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ 2022ರಲ್ಲಿ ಬಿಜೆಪಿ ಸರಕಾರ ಹೊರಡಿಸಿದ್ದ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವ ಕುರಿತ ಆದೇಶವನ್ನು ಇಂದು ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶದ ಮೂಲಕ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸಲಾಗಿತ್ತು. ಇದೀಗ ಈ ಅದೇಶವನ್ನು ವಾಪಸ್‌ ಪಡೆಯಲಾಗಿದೆ.

No Comments

Leave A Comment