.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ-ಕೆಲಸದಿ೦ದಲೇ ವಜಾಮಾಡಿ-ಖರ್ಗೆಗೆ ರಾಜ್ಯದ ಜನತೆಯ ಆಗ್ರಹ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ PSI ಕೆ.ಅನಿತಾ, ಹೆಡ್‌ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್‌ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು. ಇದರ ಬೆನ್ನಲ್ಲೇ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, PSI ಕೆ.ಅನಿತಾ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಯಾರಾದಾರೂ ಭಾಗಿಯಾಗಿದ್ದಾರಾ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ. ಯಾರಾದರೂ ಶಾಮೀಲಾಗಿರುವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು. ವ್ಯವಸ್ಥೆಯನ್ನು ಸರಿಪಡಿಸಲು ಸ್ವಲ್ಪ ಸಮಯಬೇಕು. ಬೇರು ಮಟ್ಟದಲ್ಲಿ ಸರಿಪಡಿಸಬೇಕಿದೆ ಎಂದು ಹೇಳಿದರು.

ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ಪಿಎಸ್‌ಐ ಅನಿತಾ ಮತ್ತು ತಂಡ ಜೈಪುರಕ್ಕೆ ತೆರಳಿತ್ತು. ಆದರೆ, ಪ್ರಕರಣದಿಂದ ಕೈಬಿಡಲು ಆರೋಪಿಗಳ ಕುಟುಂಬದವರಿಂದ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕುಟುಂಬದವರು ರಾಜಸ್ಥಾನದ ಎಸಿಬಿಗೆ ದೂರು ನೀಡಿದ್ದರು. ನಂತರ ಜೈಪುರದ ಹೋಟೆಲ್ ಗಂಗೌರ್‌ನಲ್ಲಿ 40 ಸಾವಿರ ರೂ. ಲಂಚ ಸ್ವೀಕರಿಸುವಾಗ ಉಳುವಪ್ಪ ತೆಗೂರು ಅವರನ್ನು ಹಣ ಸಮೇತ ಬಂಧಿಸಿತ್ತು. ವಿಚಾರಣೆಯಲ್ಲಿ ಪಿಎಸ್‌ಐ ಕೆ.ಅನಿತಾ ಮತ್ತು ಮತ್ತೊಬ್ಬ ಹೆಡ್‌ಕಾನ್‌ಸ್ಟೇಬಲ್‌ ಯತೀಶ್ ಕುಮಾರ್‌ ಅವರನ್ನು ಬಂಧಿಸಿತ್ತು.

No Comments

Leave A Comment