ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಇಷ್ಟೆಲ್ಲಾ ಅಲ್ಲೋಲ-ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ಕಾರಣ: ಮೊದಲು ಆಕೆಯನ್ನು ಧರ್ಮಸ್ಥಳದಲ್ಲಿ ನಿಲ್ಲಿಸಿ; ಎಸ್.ಟಿ ಸೋಮಶೇಖರ್

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ ಸೋಲಿಸಬೇಕು ಅಂತಾ ಅಡ್ಡ ಮತದಾನ ಮಾಡಿಸಿರಬೇಕು.

ಅವರಿಬ್ಬರು ಮೊದಲು ಧರ್ಮಸ್ಥಳದಲ್ಲಿ ಆಣೆ ಮಾಡಲಿ ಬೇರೆ ಯಾರೂ ಪ್ರಮಾಣ ಮಾಡೋದು ಬೇಕಿಲ್ಲ. ಅವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ ಎಂದರು.

ಇಷ್ಟೆಲ್ಲಾ ಅವಾಂತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ. ಶೋಭಾ ಕರಂದ್ಲಾಜೆ ಅವರಿಗೆ ಅಶೋಕ್ ಕಂಡರೆ ಆಗಲ್ಲ. ವಿಜಯೇಂದ್ರ ಕಂಡರೂ ಆಗಲ್ಲ. ಬಿಜೆಪಿಯಲ್ಲಿ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇರ ಕಾರಣ. ಮೊದಲು ಈ ಕರಂದ್ಲಾಜೆಯನ್ನ ಧರ್ಮಸ್ಥಳದಲ್ಲಿ ಹೋಗಿ ನಿಲ್ಲಿಸಲಿ ಎಂದು ಹರಿಹಾಯ್ದರು.

ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದಾರೆ. ನಾವು ಅವರಿಗೆ ಮತ ಹಾಕಿದ್ದೇವೆ. ನಾವು ಓಪನ್ ಆಗಿಯೇ ಮತ ಹಾಕಿದ್ದೇವೆ ಎಂದು ಹೇಳಿದ್ದೇವೆ.ಬಿಜೆಪಿಯಲ್ಲಿ ಅಡ್ಡ ಮತದಾನ ಹಾಕಿದವರು ಯಾರು ಅಂತಾ ಪತ್ತೆ ಹಚ್ಚಲಿ. ನನ್ನ ಕೆಣಕೋದು ಬೇಡ. ಕೆಣಕಿದರೆ ನಾವೂ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.

No Comments

Leave A Comment