ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಾಣಾವರ ಸಮೀಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ ನಿನ್ನೆ ಮಧ್ಯಾಹ್ನ ಕಾಲೇಜಿನಿಂದ ಹೊರಟಿದ್ದಳು. ತಾನು ಸದಾಶಿವನಗರದ ಸ್ಯಾಂಕಿ ಕೆರೆ ಬಳಿ ಹೋಗುತ್ತಿದ್ದು, ಸಾಯುವುದಾಗಿ ಸ್ನೇಹಿತನಿಗೆ ಮೆಸೇಜ್ ಮಾಡಿದ್ದಳು.

ಆತ ತೇಜಸ್ವಿನಿಯ ತಾಯಿಗೆ ಮೆಸೇಜ್ ಫಾರ್ವರ್ಡ್ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ತಾಯಿ ಸದಾಶಿವನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ತಡರಾತ್ರಿಯವರೆಗೆ ಹುಡುಕಾಟ ನಡೆಸಿದ್ದರು.

No Comments

Leave A Comment