ಉಡುಪಿ ಶ್ರೀ ರಾಘವೇಂದ್ರ ಮಠದಲ್ಲಿ ಆ. 29-31: ಆರಾಧನಾ ಮಹೋತ್ಸವ...ಸೆ.4ಮತ್ತು 5ರ೦ದು ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ...

ಶಿವಮೊಗ್ಗ: ಪೇಪರ್ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಯ ಭೀಕರತೆ ಕಂಡು ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.

No Comments

Leave A Comment