....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ.

ಅಮೃತಾ ಮತ್ತು ಆರೋಪಿ ಸೂರ್ಯ ಸಹೋದರ ಧನುಷ್​ ಪರಸ್ಪರ ಪ್ರೀತಿಸುತ್ತಿದ್ದರು. ಇವರೆಲ್ಲ ಒಂದೇ ಏರಿಯಾದವರಾಗಿದ್ದು, ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳ ನಡುವೆ ಪರಿಚಯವಾಗಿತ್ತು. ಅದೇ ಪರಿಚಯದಿಂದ ಧನುಷ್ ಮತ್ತು ಅಮೃತಾ ಆತ್ಮೀಯರಾಗಿದ್ರು. ಬಳಿಕ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು.

ಧನುಷ್​​ಗೆ ಅದಾಗಲೇ​ ಮದುವೆಯಾಗಿ 1 ಮಗುವಿದ್ದು, ಪತ್ನಿಯಿಂದ ಆತ ವಿಚ್ಚೇದನ ಪಡೆದಿದ್ದ. ಆದರೆ ಈ ವಿಚಾರವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದ ಎನ್ನಲಾಗಿದೆ. ನಂತರ ವಿಷಯ ಗೊತ್ತಾದ ಬಳಿಕ ಧನುಷ್​​ನಿಂದ ಅಮೃತಾ ದೂರವಾಗಿದ್ದರು. ಇದೇ ವಿಚಾರಕ್ಕೆ ಜು.13ರಂದು ಯುವತಿ ಮನೆ ಬಳಿ ಧನುಷ್​​ ಸಹೋದರ ಸೂರ್ಯ ಗಲಾಟೆ ಮಾಡಿದ್ದು, ಚಾಕು ಇರಿದಿದ್ದ. ಪ್ರಕರಣ ಸಂಬಂಧ ಆರೋಪಿಗಳಾದ ಸೂರ್ಯ ಮತ್ತು ಧನುಷ್​ನನ್ನು ಪೊಲೀಸರು ಬಂಧಿಸಿದ್ದು, ಜೀವನ್​ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್​ ದಾಖಲಾಗಿದೆ.

No Comments

Leave A Comment