.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ – ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು
ಮು೦ಬೈ: ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ ದ್ರವ್ಯ (ಡ್ರಗ್ಸ್) ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ವಿಡಿಯೋದಲ್ಲಿ ಅಧಿಕಾರಿಯು ಪ್ರತಿಭಟನಾಕಾರರನ್ನು ಬೆದರಿಸುವುದು ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುವುದು ಸ್ಪಷ್ಟವಾಗಿ ಕಂಡುಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ, ಸಾರ್ವಜನಿಕರು ಹಾಗೂ ಮಾನವ ಹಕ್ಕುಗಳ ಹೋರಾಟಗಾರರಿಂದ ಮುಂಬೈ ಪೊಲೀಸ್ ಇಲಾಖೆಯ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಯಿತು.
ನಾನು ನಿಮ್ಮನ್ನು ಮತ್ತೆ ಪ್ರತಿಭಟನೆಯಲ್ಲಿ ನೋಡಿದರೆ, ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್ ಇಡುತ್ತೇನೆ. ನಂತರ ನಿಮ್ಮ ಜೀವನವೇ ಹಾಳಾಗುತ್ತದೆ. ನಿಮಗೆ ಜಾಮೀನು ಕೂಡ ಸಿಗುವುದಿಲ್ಲ, ಜೈಲಿನಲ್ಲೇ ಕೊಳೆಯಬೇಕಾಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಹೇಳುವುದು ವಿಡಿಯೋದಲ್ಲಿ ದಾಖಲಾಗಿದೆ.
ಈ ವೇಳೆ ವಾಹನದ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ನಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರ ಈ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಆಂತರಿಕ ಇಲಾಖಾ ತನಿಖೆಗೆ ಆದೇಶಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ನಡವಳಿಕೆಯು ಶಿಸ್ತುಬಾಹಿರ, ಗಂಭೀರ ಸ್ವರೂಪದ ನಿಯಮ ಉಲ್ಲಂಘನೆ ಮತ್ತು ಅಧಿಕಾರ ದುರ್ಬಳಕೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸ್ ಆಯುಕ್ತರ ಸೂಚನೆಯಂತೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ವಲಯದ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ವಿಡಿಯೋ ಬಯಲಾಗಿದೆ.