....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!

ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಸಾಮಾನ್ಯವಾಗಿ ನಟಿ ತಾರಾ ಅವರು ಆಗಾಗ್ಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಾರೆ. ಅಲ್ಲದೇ, ಅನೇಕ ದೇವಸ್ಥಾನಗಳಿಗೂ ಭೇಟಿ ನೀಡುತ್ತಾರೆ. ಇದೇ ಮೊದಲ ಬಾರಿಗೆ ಕಲಾವಿದರ ಜೊತೆ ಒಟ್ಟಾಗಿ ದರ್ಶನ ಪಡೆದಿರುವುದು ವಿಶೇಷ.

ಒಟ್ಟಿಗೆ ದರ್ಶನ ಪಡೆದ ನಂತರ, ದೇವಸ್ಥಾನದ ಆವರಣದಲ್ಲಿ ಮೂವರು ತಾರೆಯರು ಕ್ಲಿಕ್ಕಿಸಿಕೊಂಡಿರುವ ಸುಂದರ ಫೋಟೋಗಳು ಇದೀಗ ವೈರಲ್‌ ಆಗಿವೆ.

No Comments

Leave A Comment