....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಜಪಾನ್ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ; ಹಲವು ಕಟ್ಟಡಗಳು ನೆಲಸಮ, 13 ಮಂದಿ ಸಾವು
ಟೋಕಿಯೋ:ಜು. 29,ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ.
ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು ಇದು 7.1 ತೀವ್ರತೆ ಹೊಂದಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಈ ಪ್ರಬಲ ಭೂಕಂಪದಿಂದಾಗಿ ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ ಹಲವೆಡೆ ಕಟ್ಟಡಗಳು ಕುಸಿದಿದ್ದು, ಸೇತುವೆಗಳು ಜಖಂಗೊಂಡಿವೆ ಮತ್ತು ಗೂಡ್ಸ್ ರೈಲುಗಳು ಉರುಳಿಬಿದ್ದಿವೆ.
ಭೂಕಂಪದ ಬಳಿಕ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಒಂದು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಜನರು ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಜಪಾನ್ ಸರ್ಕಾರ ಸೂಚಿಸಿದೆ. ಇನ್ನು ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಹಾಗೂ ಮಿಯಾಜಾಕಿ ಸೇರಿದಂತೆ ಹಲವು ಪ್ರಾಂತ್ಯಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.