...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಪ್ಪಿನಂಗಡಿ| ನಿಂತಿದ್ದ ಟಿಪ್ಪರ್‌ಗೆ ಕಾರು ಢಿಕ್ಕಿ: ಐವರಿಗೆ ಗಾಯ

ಉಪ್ಪಿನಂಗಡಿ: ಜು. 29,ನಿಂತಿದ್ದ ಟಿಪ್ಪರೊಂದರ ಹಿಂಬದಿಗೆ ಕಾರೊಂದು ಢಿಕ್ಕಿಯಾಗಿ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜು.28ರಂದು ನಡೆದಿದೆ.

ಕಾರಿನಲ್ಲಿದ್ದ ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ಮಹಮ್ಮದ್ ಇಲ್ಹಾನ್ (4) ಗಾಯಗೊಂಡವರು. ಮೂಲತಃ ಫರಂಗಿಪೇಟೆಯವರಾದ ಇವರು ಫರಂಗಿಪೇಟೆ ಕಡೆಯಿಂದ ಉಪ್ಪಿನಂಗಡಿ ಕಡೆ ಸಂಚರಿಸುವಾಗ ಈ ದುರ್ಘಟನೆ ನಡೆದಿದೆ.

ಮೈರಕಟ್ಟೆ ಎಂಬಲ್ಲಿ ಹೆದ್ದಾರಿ ಬದಿ ಟಿಪ್ಪರೊಂದು ನಿಂತಿದ್ದು, ಕಾರು ಹಿಂಬದಿಯಿಂದ ಬಂದು ಟಿಪ್ಪರ್‍ಗೆ ಢಿಕ್ಕಿಯಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment