....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಪಾಕಿಸ್ತಾನದಲ್ಲಿ ಕಲ್ಲಿದ್ದಲು ಗಣಿ ಸ್ಫೋಟಕ್ಕೆ 32 ಸಾವು; ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಟ

ಬಲೂಚಿಸ್ಥಾನ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ಥಾನದ ಕ್ವೆಟ್ಟಾದ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟಕ್ಕೆ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಏನಿದು ಘಟನೆ?

ಜುಲೈ 30 ರಂದು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಕ್ವೆಟ್ಟಾದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಮೀಥೇನ್ ಅನಿಲ ಸಂಗ್ರಹವಾಗಿರುವುದರಿಂದ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಸ್ಥಳದಲ್ಲಿದ್ದ 32 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಜೊತೆಗೆ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ, ಆರಂಭಿಕ ವರದಿಗಳು 18 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಣಿಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಿದ್ದರೂ, ರಕ್ಷಣಾ ತಂಡಗಳು ಅವಶೇಷಗಳಿಂದ ಶವಗಳನ್ನು ಹೊರತೆಗೆಯವುದನ್ನು ಮುಂದುವರಿಸುತ್ತಿದ್ದಂತೆ ಸಾವುನೋವುಗಳ ಅಂಕಿಅಂಶಗಳು ಕೂಡ ವೇಗವಾಗಿ ಏರುತಿದೆ.

ಏತನ್ಮಧ್ಯೆ, ಸುಮಾರು 10 ಕಾರ್ಮಿಕರು ಇನ್ನೂ ಕೂಡ ಗಣಿ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದ್ದು, ಆ ಕಾರ್ಮಿಕರನ್ನು ಉಳಿಸಲು ಆಮ್ಲಜನಕವನ್ನು ಪಂಪ್ ಮಾಡಲಾಗುತ್ತಿದೆ. ಆದರೆ ವಿಷಕಾರಿ ಅನಿಲ ಮತ್ತು ಕುಸಿದಿರುವ ಕಲ್ಲುಗಳು ರಕ್ಷಣಾ ಕಾರ್ಯಕ್ಕೆ ತೀವ್ರ ಪರಿಣಾಮವನ್ನು ಉಂಟುಮಾಡುತ್ತಿವೆ ಎನ್ನಲಾಗಿದೆ.

ಸ್ಫೋಟಕ್ಕೆ ಕಾರಣವೇನು?

ಗಣಿಯೊಳಗೆ ಅಪಾಯಕಾರಿ ಮೀಥೇನ್ ಅನಿಲ ಶೇಖರಣೆಗೊಂಡು ಈ ಭೀಕರ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಅಂದಾಜು ಸುಮಾರು 4,500 ಅಡಿ ಆಳದ ಗಣಿ ಸುರಂಗಗಳು ಕುಸಿದುಬಿದ್ದಿವೆ. ಏತನ್ಮಧ್ಯೆ, ಗಣಿ ಸ್ಪೋಟದಲ್ಲಿ ಸಾವಿಗೀಡಾದ ಕುಟುಂಬಗಳಿಗೆ ಬಲೂಚಿಸ್ಥಾನ ಸರ್ಕಾರವು ತಲಾ 5 ಲಕ್ಷ ಪಾಕಿಸ್ತಾನಿ ರೂಪಾಯಿ (ಸುಮಾರು US$1,800) ಪರಿಹಾರ ಘೋಷಿಸಿದೆ. ಇದೇ ವೇಳೆ ಸ್ಫೋಟದ ಕಾರಣ ಮತ್ತು ಗಣಿಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment