.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ
ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.
ಈ ವಿಚ್ಛೇದನ ಅರ್ಜಿ ತಮಿಳುನಾಡು ರಾಜಕೀಯ ಮತ್ತು ಸಿನಿ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಟಿ ತ್ರಿಷಾ ಕೃಷ್ಣನ್ ಹೆಸರು ಕೂಡ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಂಪತಿಗಳು ಮತ್ತೆ ಒಂದಾಗುವ ಸೂಚನೆ ನೀಡಿದ್ದು, ಪ್ರಕರಣ ಸುಖಾಂತ್ಯವಾಗಿದೆ.