....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ವಿಧಾನ ಪರಿಷತ್ ಸದಸ್ಯೆಯಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.
ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯ ಎಸ್ ರವಿ , ಐವನ್ ಡಿ’ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.