ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ದೂರವಾಗಿ 2 ದಿನ ಆಹಾರವಿಲ್ಲದೇ ಬಳಲಿದ್ದ ಮರಿಗಳು ನಿತ್ರಾಣಗೊಂಡಿದ್ದವು. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್‌

ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು

ಬೆಳಗಾವಿ: 11 ಜನರನ್ನು ಬಲಿ ಪಡೆದ ಜೂನ್ 4ರ ಕಾಲ್ತುಳಿತ ಘಟನೆಯ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಎಲ್ಲ ರೀತಿಯ ಪಂದ್ಯಗಳಿಂದ ದೂರ ಉಳಿದಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ರಿಕೆಟ್ ಅಭಿಮಾನಿಗಳಿಗೆ ಬುಧವಾರ ಗುಡ್ ನ್ಯೂಸ್ ನೀಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ ಎಂದು ಶಿವಸೇನಾ- ಯುಬಿಟಿ ನಾಯಕ ಆದಿತ್ಯ ಠಾಕ್ರೆ ಸೋಮವಾರ ಹೇಳಿದ್ದಾರೆ. ಅವರು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕರನ್ನು ಉಲ್ಲೇಖಿಸಿ ಈ ಮಾತುಗಳನ್ನಾಡಿದ್ದಾರೆ.ಜೂನ್ 2022 ರಲ್ಲಿ ಶಿಂಧೆ ನೇತೃತ್ವದ

ನವದೆಹಲಿ: 'ವಂದೇ ಮಾತರಂ' ಗೀತೆಯ 150ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ 'ವಂದೇ ಮಾತರಂ' ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಜರುಗಿದ ಶ್ರೀರಾಮನಾಮಜಪ ಸ೦ಕೀರ್ತನೆಯ ಕೇ೦ದ್ರದ ಪ್ರತಿನಿಧಿಯಾಗಿ ದೇವಸ್ಥಾನದ ಮೊಕ್ತೇಸರರಾದ ಕೆ.ಲಕ್ಷ್ಮೀನಾರಾಯಣ ನಾಯಕ್ ರವರು ಪರ್ತಗಾಳಿಯಲ್ಲಿ ಶ್ರೀಗೋಕರ್ಣ ಮಠಾಧೀಶರಾದ ಶ್ರೀಶ್ರೀ ವಿದ್ಯಾಧೀಶ ತೀರ್ಥಶ್ರೀಪಾದ ಒಡೆಯರ್ ರವರಿ೦ದ ರಾಮನಾಮ ಜಪದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರಿ೦ದ ಆಶೀರ್ವಾದ ಪತ್ರದೊ೦ದಿಗೆ ಶ್ರೀರಾಮ ದೇವರ ಮೂರ್ತಿ,ಬೆಳ್ಳಿಯ ನಾಣ್ಯ ಪಡೆದು ಆಶೀರ್ವಾದವನ್ನು ಪಡೆದರು.

ಮಂಗಳೂರು : ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ

ಗಂಗಾವತಿ: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19)

ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ನಿರ್ಮಿಸಲಿರುವ ಪ್ರಸ್ತಾವಿತ ಬಾಬರಿ ಮಸೀದಿ ಮಾದರಿಯ ಮಸೀದಿಗಾಗಿ ಇರಿಸಲಾಗಿರುವ ದೇಣಿಗೆ ಪೆಟ್ಟಿಗೆಗಳು ಬಹುತೇಕ ತುಂಬಿವೆ. ಭೌತಿಕವಾಗಿ ಮತ್ತು ಆನ್‌ಲೈನ್‌ ಮೂಲಕ ದೇಣಿಗೆಗಳು ಹರಿದುಬರುತ್ತಲೇ ಇದ್ದು ನಗದು ಎಣಿಕೆ ಯಂತ್ರಗಳು ರಾತ್ರಿಯಿಡೀ ಓಡಾಡುತ್ತಿವೆ. ನಾಲ್ಕು ದೇಣಿಗೆ ಪೆಟ್ಟಿಗೆಗಳು ಮತ್ತು ಒಂದು