```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ

ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ವೃದ್ಧೆಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ, ಕಂಬಕ್ಕೆ ಕಟ್ಟಿ ನೆರೆಹೊರೆಯವರು ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜೂನ್ 24

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),

ಚಿಕ್ಕಬಳ್ಳಾಪುರ: ಜೂನ್​ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ

ನ್ಯೂಜೆರ್ಸಿ: ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಯುವತಿಯೊಬ್ಬಳು ನಾಪತ್ತೆಯಾಗಿರುವುದಾಗಿ ನ್ಯೂಜೆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವತಿ ಸಿಮ್ರಾನ್ ಎಂದು ಗುರುತಿಸಲಾಗಿದೆ. ಆಕೆ ಬುಧವಾರ ನಾಪತ್ತೆಯಾಗುವ ಮುನ್ನಾ ಯಾರಿಗೂ ಕಾಯುತ್ತಿರುವುದು ಹಾಗೂ ತನ್ನ ಫೋನ್ ಅನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ ಎಂದು

ಪುರಿ: ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ,