ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬೀಜಿಂಗ್ :ಡಿ 19: ಚೀನಾ ದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 118 ಜನರು ಸಾವನ್ನಪ್ಪಿದ್ದಾರೆ. 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೊರಬಿದ್ದಿದೆ. ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಮಂಗಳವಾರ ಮತ್ತೆ ಭದ್ರತಾ ಉಲ್ಲಂಘನೆ ಪ್ರಕರಣದ ಗದ್ದಲ, ಕೋಲಾಹಲ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷರು ಲೋಕಸಭೆಯಿಂದ ಫಾರೂಕ್ ಅಬ್ದುಲ್ಲಾ, ಶಶಿ ತರೂರ್, ಮನೀಶ್ ತಿವಾರಿ, ಸುಪ್ರಿಯಾ ಸುಳೆ, ಮೊಹಮ್ಮದ್ ಫೈಸಲ್, ಕಾರ್ತಿ ಚಿದಂಬರಂ, ಸುದೀಪ್ ಬಂಧೋಪಾಧ್ಯಾಯ, ಡಿಂಪಲ್ ಯಾದವ್ ಮತ್ತು ಡ್ಯಾನಿಶ್ ಅಲಿ ಸೇರಿದಂತೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ.

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು ಮ೦ಗಳವಾರವಾದ ಇ೦ದಿಗೆ 3ನೇ ದಿನದತ್ತ ಸಾಗುತ್ತಿದೆ. ಮು೦ಜಾನೆಯ ಎರಡನೇ ದಿನದ ಕಾಕಡಾರತಿಯು ವಿಜೃ೦ಭಣೆಯಿ೦ದ ನಡೆಸಲಾಯಿತು. ನೂರಾರುಮ೦ದಿ ಈ ಕಾಕಡಾರತಿಯನ್ನು ವೀಕ್ಷಿಸಿ ಪವಾನರಾದರು. ನ೦ತರ ಕಲ್ಯಾಣಪುರ ನಾರಾಯಣ ಭಟ್ ಮನೆತನದವಾರದ ಕೆ.ಸೀತಾರಾಮ ಭಟ್,ಕಾಶೀನಾಥ ಭಟ್ ಸಹೋದರರಿ೦ದ ಭಜನಾ ಕಾರ್ಯಕ್ರಮವು ಜರಗಿತು. ಸೋಮವಾರದ೦ದು ಆಹ್ವಾನಿತ

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ 95ನೇಭಜನಾ ಮಹೋತ್ಸವದ ಆರಾಧ್ಯ ಶ್ರೀ ವಿಠೋಬ ರಖುಮಾಯಿ ಸನ್ನಿಧಿಯಲ್ಲಿ ಆದಿತ್ಯವಾರ ಪ್ರಸಿದ್ಧ ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ ನೆಡೆಯಿತು. ಇವರ ಹಾಡುಗಳಿಗೆ ಮೆಚ್ಚಿ ವೇ ,ಮೂ , ಕಾಶಿನಾಥ ಭಟ್ ಕಲ್ಯಾಣಪುರ ಕಲಾವಿದರಿಗೆ ತುಳಸಿ ಮಣಿ

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ

ಉಡುಪಿ: ಕಲ್ಯಾಣಾಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಸೋಮವಾರದ೦ದು ಎರಡನೇ ದಿನದತ್ತ ಸಾಗುತ್ತಿದ್ದು ವಿವಿಧ ಆಹ್ವಾನಿತ ಭಜನಾ ಮ೦ಡಳಿಯವರವಯಿ೦ದ ಭಜನಾ ಕಾರ್ಯಕ್ರಮವು ಜರಗುತ್ತಿದೆ. ದೇವರಿಗೆ ಇ೦ದು ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿದ್ದು ಮಧ್ಯಾಹ್ನದ ಮಹಾ ಪೂಜೆಯೊ೦ದಿಗೆ ಸಮಾರಾಧನೆಯು ನಡೆಯಿತು. ಬೆಳಿಗ್ಗೆ 10ರಿ೦ದ 11ರವರೆಗೆ ಭದ್ರಗಿರಿ ಶ್ರೀವೀರವಿಠಲ ಭಜನಾ

ಬೆಂಗಳೂರು:ಡಿ 18 : ತೆರಿಗೆ ವಂಚನೆಗೆ ಸಂಬಂಧಿಸಿ ಆಭೂಷಣ್‌ ಜ್ಯುವೆಲ್ಲರಿ ಶೋರೂಂ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ನಾಲ್ಕು ದಿನಗಳಿಂದ ತಪಾಸಣೆ ನಡೆಯುತ್ತಿದೆ. ಈ ನಡುವೆ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಮತ್ತೊಂದು ಎಫ್‌ಐಆರ್‌ ದಾಖಲು ಮಾಡಲಾಗಿದೆ. ಆಭೂಷಣ್‌ ಜ್ಯುವೆಲ್ಲರಿ ಮೇಲೆ ದಾಳಿ

ಕಾಪು:ಡಿ 18, ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23)