ಉಡುಪಿಯ ಶ್ರೀಕೃಷ್ಣ ದೇವರಿಗೆ ಇ೦ದು ಭಾನುವಾರದ೦ದು ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಅಲ೦ಕಾರ. ಹಾಗೂ ಶ್ರೀಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.
ಬೆಂಗಳೂರು: ಏಕರೂಪ ನಾಗರಿಕ ಸಂಹಿತೆಯನ್ನು(UCC) ಜಾರಿಗೆ ತರಬೇಕೆಂದು ಹೈಕೋರ್ಟ್, ಸಂಸತ್ತು ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೈಕೋರ್ಟ್ ಹೇಳಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ
ರಾಮೇಶ್ವರಂ: ರಾಮೇಶ್ವರಂ ದ್ವೀಪ ಮತ್ತು ಮುಖ್ಯ ಭೂಭಾಗದ ನಡುವೆ ರೈಲು ಸಂಪರ್ಕವನ್ನು ಒದಗಿಸುವ ಪಂಬನ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. ಪಂಬನ್ ಸೇತುವೆಯನ್ನು ತೆರೆದ ನಂತರ, ಪ್ರಧಾನಿ ಮೋದಿ ರಾಮೇಶ್ವರಂ - ತಾಂಬರಂ ಎಕ್ಸ್ಪ್ರೆಸ್ನಿಂದ ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ರೈಲು ಪಂಬನ್ ಸೇತುವೆಯನ್ನು
ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ
ಉತ್ತರ ಕನ್ನಡ, ಏಪ್ರಿಲ್ 06: ವಿಶ್ವಗುರು ಆಗಬೇಕನ್ನುವ ಭಾರತ (India), ವಿವಿಧ ರಂಗದಲ್ಲಿ ತನ್ನದೆ ಆದ ಛಾಪು ಮೂಡಿಸುವುದರ ಮೂಲಕ ಈಡಿ ಜಗತ್ತೆ ತನ್ನತ್ತ ನೋಡುವಂತ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಅದರ ಮುಂದುವರೆದ ಭಾಗವಾಗಿ ಹಿಂದೂ ಮಹಾಸಾಗರಕ್ಕೆ (Indian Ocean) ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು, ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಗೆ ಮುಂದಾಗಿದ್ದು,
ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಶನಿವಾರ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2025 ಕ್ಕೆ ಸಹ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5,
ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ
ಉಪ್ಪಿನಂಗಡಿ:ಏ.4, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ
ಥೈಲ್ಯಾಂಡ್: ಥೈಲ್ಯಾಂಡ್ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. "ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ
ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರ್ ಹಾಗೂ ಆಟೋ ರಿಕ್ಷಾ