ಮಂಗಳೂರು, (ಡಿಸೆಂಬರ್ 03): ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದ ಫೆಂಗಾಲ್ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಬಜ್ಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಬಜ್ಪೆ -ಅದ್ಯಪಾಡಿಯ ಸಂಪರ್ಕ ಕಡಿತವಾಗಿದೆ. ಅದ್ಯಪಾಡಿಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ
ಬೆಂಗಳೂರು: ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕೋತ್ಸವ ಪರ್ಯಾಯ ಉಭಯ ಶ್ರೀಪಾದರು ಹಾಗೂ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ರಥರೋಹಣ ಕಾರ್ಯಕ್ರಮವು ಜರಗಿತು.ಸ೦ಜೆ ರಥೋತ್ಸವವು ಜರಗಲಿದೆ.
ಉಡುಪಿ:ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಪ್ರಥಮವಾದ ಬಾಳೆಮುಹೂರ್ತ ಡಿ. 6ರಂದು ಬೆಳಿಗ್ಗೆ 7 ಗಂಟೆಗೆ ವೃಶ್ಚಿಕ ಲಗ್ನ ಸುಹೂರ್ತದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ ತಿಳಿಸಿದರು. ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ
ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಶ್ರೀನಗರ:ಡಿ.03,ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ದಾಚಿಗಂ ಅರಣ್ಯ
ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಷದ್ವೀಪ್ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ,
ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ. ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,ಮೈಲಂನಲ್ಲಿನ
ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ