.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್‌ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ

ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್​ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಹಾಸನ, ಡಿಸೆಂಬರ್​ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ

ಉಡುಪಿ:ಶಾಲಾ ಮಕ್ಕಳ ಹೆತ್ತವರೇ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ತಕ್ಷಣವೇ ಎಚ್ಚರವಹಿಸಿ-ಡ್ರೈನೇಜು ನೀರಿನಿ೦ದ ಗಬ್ಬುನಾಥ ಹೊಡೆಯುತ್ತಿದೆ ರಾಜಾ೦ಗಣದ ಹಿ೦ಬದಿಯ ರಸ್ತೆ. ನಗರಸಭೆ,ಶಾಲಾ ಆಡಳಿತ ಮ೦ಡಳಿಯವರು ಈ ಸಮಸ್ಯೆಗೆ ತಕ್ಷಣವೇ ಶಾಶ್ವತ ಪರಿಹಾರದೊರಕಿಸುವಲ್ಲಿ ಕಾರ್ಯಪ್ರವೃತ್ತರಾಗುವ೦ತೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಹಾಗೂ ಸಾರ್ವಜನಿಕರಿ೦ದ ವಿನ೦ತಿ. ಈಗಾಗಲೇ ಹಲವಾರು ಬಾರಿ ಈ ಸಮಸ್ಯೆಯು

ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದ ಜಯ್ ಶಾ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ಅಧ್ಯಕ್ಷರಾಗಿ ಅಧಿಕಾರ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇವರಿಂದ ಭರತಮುನಿ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀ ಪಾದರು ನೆರವೇರಿಸಿದರು.ಸಮಾರ೦ಭದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್‌ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ

ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ

ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ