ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಕೋಲಾರ: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ  ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಸಚಿವರಾದ ಡಾ.  ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ,

ರೇಕ್ಯಾವಿಕ್: ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್‌ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ. ಕಳೆದ 14 ಗಂಟೆಗಳಲ್ಲಿ ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ ಐಸ್‍ಲ್ಯಾಂಡ್‍ನಲ್ಲಿ  ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ  ಘೋಷಿಸಲಾಗಿದೆ. ಈಗ

ಆನೇಕಲ್: ನ.11: ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ

ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ. ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್'ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಮಹತ್ವದ ಆದೇಶ ಎಂದು ತಿಳಿಯಲಾಗಿದೆ. ಮೋಸ, ವಂಚನೆ ,ನಕಲಿ

ಉಡುಪಿ :ನ.11, ಬಿ. ಜೆ. ಪಿ. ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕನಾಗಿ, ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ.ರಾಘವೇಂದ್ರ ಅವರಿಗೆ ಇದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿ.

ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,