.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಬೆಂಗಳೂರು: ಈ ವರ್ಷ ನವೆಂಬರ್ 1ರಂದು 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲಾ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ  ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1

ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ  ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ  ಚಿನ್ನದ ಕಿರೀಟವನ್ನು

ಬೆಂಗಳೂರು, ಅಕ್ಟೋಬರ್ 11: ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್​ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಶಾಸಕ ವಿನಯ್​ ಕುಲಕರ್ಣಿ ವಿರುದ್ಧ ರೈತ ಮಹಿಳೆ

ಉಡುಪಿ:ಕಳೆದ ನಾಲ್ಕು ದಶಕಗಳಿಂದ ಜವುಳಿ ಉದ್ಯಮದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು. ಸಂಸ್ಥೆಯ ಗಣ್ಯ ಗ್ರಾಹಕರಲ್ಲೊಬ್ಬರಾದ ಉದ್ಯಮಿ ಡಾ.ಜಿ. ಶಂಕರ್ ಸಂದರ್ಭ ಮಾತನಾಡಿ, ಆರ್.ಕೆ. ಸಹೋದರರು ಸಣ್ಣ ಅಂಗಡಿಯ

ಉಡುಪಿ: ದೇಶಾದ್ಯಂತ 180ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳನ್ನು ಹೊಂದಿರುವ ‘ದ ಓಶಿಯನ್ ಪರ್ಲ್ ಗ್ರೂಫ್ ಆಪ್ ಹೊಟೇಲ್’ನಿಂದ ಉಡುಪಿಯಲ್ಲಿ 2ನೇ ಹೊಟೇಲ್ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉಡುಪಿ ಹೃದಯ ಭಾಗದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ಬುಧವಾರ ಉದ್ಘಾಟಿಸಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ

ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ದತ್ತಾತ್ರೇಯ ಶೇಟ್ ಈ ಹಿಂದಿನಿಂದಲೂ ದೀಪಾವಳಿ ಹಾಗೂ ಗಣೇಶ ಚೌತಿಯ ಸಂದರ್ಭ

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ

ಮಂಗಳೂರು: ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(40), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(31) ದಸ್ತಗಿರಿ ಮಾಡಿದ ಆರೋಪಿಗಳು. ಮಂಗಳೂರು

ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು - ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.