.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಕಾರ್ಕಳ: ಜು.27: ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶುಮಾಡಿ, RSS ಸಿದ್ಧಾಂತಕ್ಕೆ ವಿರೋಧವಾಗಿ ನಡೆದುಕೊಂಡಿರುವ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಕಳದ

ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್​ನಲ್ಲಿ ಏನೂ‌ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು​ ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ​ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ತಿರುಗೇಟು ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರಿನ ಒಳಹರಿವು 2.5 ಲಕ್ಷ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಪ್ರವಾಹ ಭೀತಿಯಿಂದಾಗಿ ಅಥಣಿ ಹುಲಗಬಾಳ ಗ್ರಾಮದ ಪಕಾಲಿ ತೋಟ ಸೇರಿದಂತೆ ಮಾಂಗ ತೋಟದ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ

ಬೆಂಗಳೂರು: ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮ ಹಗರಣಗಳ ಕುರಿತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಜು.29ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದು, ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ನಾಯಕರ ದೆಹಲಿ

ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಖಾದಿ ಗ್ರಾಮೋದ್ಯೋಗ ವ್ಯವಹಾರವು 1.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ. ಖಾದಿ ಮತ್ತು ಕೈಮಗ್ಗ ವಲಯಗಳಿಂದ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ತಮ್ಮ ಮನ್ ಕಿ ಬಾತ್ ಮಾಸಿಕ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಖಾದಿ ಉತ್ಪನ್ನಗಳನ್ನು ಹೆಚ್ಚು ಇಷ್ಟಪಡದವರು

ತಮಿಳುನಾಡಿನ ಕಡಲೂರಿನಲ್ಲಿ ಪಳನಿಸ್ವಾಮಿ ಪಕ್ಷದ ಎಐಎಡಿಎಂಕೆ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು. ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದಿದೆ. ಕೆಲವೇ ಕ್ಷಣಗಳಲ್ಲಿ ಅವರು

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೊದಲ ದಿನ ಭಾರತಕ್ಕೆ ನಿರಾಸೆ ಮೂಡಿದೆ. ಆದರೆ ಚೀನಾ ಮೊದಲೆರೆಡು ಚಿನ್ನದ ಪದಕ ಗೆದ್ದಿದೆ. ಮೊದಲು ಮಿಶ್ರ ಸ್ಪರ್ಧೆಯಲ್ಲಿ ಮತ್ತು ನಂತರ ಸಿಂಗಲ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತ ತಂಡ ಫೈನಲ್‌ನಲ್ಲಿ ಸ್ಥಾನ ಕಳೆದುಕೊಂಡಿತು. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅರ್ಜುನ್ ಸಿಂಗ್

ಬೀದರ್, ಜುಲೈ 27: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್  ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ

ಫ್ರಾನ್ಸ್​ ರಾಜಧಾನಿ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಭಾರತೀಯ ಸ್ಪರ್ಧಿಗಳಿಂದ ನೀರಸ ಪ್ರದರ್ಶನ ಮೂಡಿಬಂದಿದೆ. ಶನಿವಾರ ನಡೆದ 10 ಮೀಟರ್ ಏರ್ ರೈಫಲ್ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತದ ನಾಲ್ವರು ಶೂಟರ್​ಗಳು ಭಾಗವಹಿಸಿದ್ದರು. ಆದರೆ ಮಿಶ್ರ ಏರ್​ ರೈಫಲ್​ ವಿಭಾಗದಲ್ಲಿ ಪದಕದ ಸುತ್ತಿಗೆ ಪ್ರವೇಶಿಸುವಲ್ಲಿ ಭಾರತೀಯ ಶೂಟರ್​ಗಳು ವಿಫಲರಾಗಿದ್ದಾರೆ. 10

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ  ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್