.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಪ್ಯಾರಿಸ್ ಒಲಿಂಪಿಕ್ಸ್‌ನ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ. ಇದರೊಂದಿಗೆ ಭಾರತ ತಂಡ ನಾಲ್ಕನೇ ಸ್ಥಾನ ಪಡೆದು ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ವೈಯಕ್ತಿಕ ಸ್ಕೋರ್ ಕುರಿತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ನವದೆಹಲಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಪಂಜಾಬ್-ಹರಿಯಾಣ "ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ವಿಮಾನವು ದೇಶೀಯ ಶೌರ್ಯ ಏರ್‌ಲೈನ್‌ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸಾರ್ಟ್

ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ

ದೆಹಲಿಯ ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಪುತ್ರಿ ಅಮಿತಾ ಪ್ರಜಾಪತಿ ಕಳೆದ ಹತ್ತು ವರ್ಷಗಳ ನಿರಂತರ ಪ್ರಯತ್ನದ ನಂತರ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಸತತ ಪ್ರಯತ್ನಗಳ ಬಳಿಕ ಮಗಳು ಸಿಎ ಪಾಸ್ ಆಗಿರುವ ಖುಷಿಗೆ

ತಿರುಪತಿ ತಿಮ್ಮಪ್ಪನ ಭಕ್ತರ ಪರಮ ಭಕ್ತಿಯ, ಹೆಚ್ಚು ಇಷ್ಟಪಡುವ ಲಡ್ಡುವಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚು ಹೆಚ್ಚು ಕೇಳಿಬರುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಈಗ ಅದರ ಬಗ್ಗೆ ಹೆಚ್ಚು ಗಮನಹರಿಸಿದೆ. ಲಡ್ಡು ತಯಾರಿಕೆಗೆ ಸರಬರಾಜಾಗುವ ತುಪ್ಪ ಕಳಪೆ ಗುಣಮಟ್ಟದ್ದಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು