ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ
ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ
ಕಾರ್ಕಳ:ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.
ಬೆಂಗಳೂರು: ಇಲ್ಲಿನ ಪಬ್ನ ಶೌಚಾಲಯದೊಳಗೆ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ ಅವರು
ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಉಲ್ಲಂಘನೆ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್ಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ
ಸ್ಟಾಕ್ಹೋಮ್: ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಮುಖಭಂಗವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ
ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು
ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ
ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಶ್ರೀಮತಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮೆಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಈ ದಿನ ದಸ್ತಗಿರಿ