``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ

ಮುಂಬೈ: ಗೋಮಾಂಸ ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಗೋರಕ್ಷಕರ ಗುಂಪೊಂದು ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ. ಮುಂಬೈನ ಕುರ್ಲಾದ ಅಫಾನ್ ಅನ್ಸಾರಿ (32) ಕೊಲೆಯಾದ ವ್ಯಕ್ತಿ. ಅನ್ಸಾರಿ ತನ್ನ ಸಹಾಯಕ ನಾಸಿರ್ ಶೇಖ್ ಜೊತೆ ಕಾರಿನಲ್ಲಿ ಮಾಂಸವನ್ನು ಸಾಗಿಸುತ್ತಿದ್ದಾಗ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

ನವದೆಹಲಿ: ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಇಂದು ಸೋಮವಾರ ನಸುಕಿನ ಜಾವ ದೆಹಲಿಗೆ ಬಂದಿಳಿದರು. ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ದೆಹಲಿಯ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ ದೇವ್, ದೆಹಲಿಯ ಬಿಜೆಪಿ ಸಂಸದರು, ವಿದೇಶಾಂಗ ಇಲಾಖೆ

ಗಂಜಾಂ​ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಉಭಯ ನಾಯಕರು ತಮ್ಮ ಸಭೆಯಲ್ಲಿ ಮಹತ್ವದ ತಿಳುವಳಿಕೆ ಪತ್ರಗಳಿಗೆ (ಎಂಒಯು)

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ. ಮೃತರನ್ನು ಯಶೋಧ ಹಾಗೂ ಇಮ್ಯಾನುವಲ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದ ಯಶೋಧ ತೋಟದಲ್ಲಿದ್ದ

ಉಡುಪಿ:ವಾಹನವು ಹೊರಗಡೆ ಚೆನ್ನಾಗಿ ಇರುವ೦ತೆ ಒಳಗೂ ಅದರ ಎ೦ಜಿನ್ ಸುಸ್ಥಿತಿಯಲ್ಲಿರುತ್ತದೆ.ಹಾಗೆಯೇ ನಮ್ಮ ಬದುಕು ಕೂಡ ಹೊರಗಿನ ಶೃ೦ಗಾರ ಮಾತ್ರವಲ್ಲ ಒಳಗೂ ಚೆನ್ನಾಗಿರಬೇಕು ಎ೦ದು ಅದಮಾರು ಮಠಾಧೀಶರಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹೇಳಿದರು. ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿ೦ದ ಶನಿವಾರದ೦ದು ಪೂರ್ಣಪ್ರಜ್ಞ ಕಾಲೇಜಿನ ಶ್ರೀಪೂರ್ಣಪ್ರಜ್ಞ ಆಡಿಟೋರಿಯ೦ನಲ್ಲಿ ಹಮ್ಮಿಕೊ೦ಡಿದ ವಿಶ್ವಾರ್ಪಣಮ್ -"ಸ್ನೇಹ-ಧರ್ಮ-ಕರ್ತವ್ಯ"ಚಿ೦ತನ-ಮ೦ಥನ ಕಾರ್ಯಕ್ರಮ

ಡೆಹ್ರಾಡೂನ್: ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಮಾಹಿತಿ ನೀಡಿದ್ದು, ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸೋನ್‌ಪ್ರಯಾಗದಲ್ಲಿ ಕೇದಾರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಉತ್ತರ ಭಾರತದಲ್ಲಿ ಮಾನ್ಸೂನ್ ಮಾರುತಗಳು ಪ್ರವೇಶ

ನವದೆಹಲಿ: ಅಪರೂಪದಲ್ಲೇ ಅಪರೂಪ ಎಂಬಂತೆ ಬರೊಬ್ಬರಿ 62 ವರ್ಷಗಳ ಬಳಿಕ ದೇಶದ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ರಾಜಧಾನಿ ಮುಂಬೈಗೆ ಮಾನ್ಸೂನ್ ಮಳೆ ಏಕಕಾಲದಲ್ಲಿ ಪ್ರವೇಶ ಮಾಡಿದೆ. ಹೌದು.. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬೈಗೆ ಈ ಬಾರಿ ಒಂದೇ ಸಲ ಮಾನ್ಸೂನ್ ಪ್ರವೇಶಿಸಿದ್ದು,  62 ವರ್ಷಗಳಲ್ಲಿ ಇದೇ

ಶಿವಮೊಗ್ಗ: ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಮನೆ ಮಾಲಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ