``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakrathirtha) ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದೆ. ಒಕ್ಕೂಟವು ಮೇ 29 ರಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ

ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್‌ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್‌ ಕೋಲಾಚಿಯಡ್ಕದ ಮೊಹಮ್ಮದ್‌ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು

ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ

ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯಗಳನ್ನು ಭೇಟಿ ಮಾಡಿ ರೈತರ

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. ಮೇ 30-31 ರ ಮಧ್ಯರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಅನುಮಾನಾಸ್ಪ ಓಡಾಟಗಳು ಕಂಡು ಬಂಂದ ಹಿನ್ನೆಲೆಯಲ್ಲಿ  ಜಮ್ಮು ಮತ್ತು

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ  ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ

ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ. ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ

ಉಡುಪಿ:ಮೇ 30. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ

ದುಬೈ:ಮೇ 30. 2,000 ರೂ.ನೋಟುಗಳ ಚಲಾವಣೆಯ ಸ್ಥಗಿತಗೊಳಿಸಲು ಇನ್ನೂ ಕೆಲವೇ ತಿಂಗಳುಗಳಿವೆ. ಅದರಲ್ಲಿಯೂ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಬ್ಯಾಂಕ್‌ಗಳಿಗೆ ಆರ್‌ಬಿಐ ಆದೇಶ ನೀಡಿದ್ದು, ಇದರಿಂದ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪರದಾಡಿದ್ದಾರೆ. 2,000ರೂ. ನೋಟುಗಳ ಚಲಾವಣೆಯ ಸ್ಥಗಿತದಿಂದ ಭಾರತ ಬಿಟ್ಟು ಬೇರೆ ದೇಶಕ್ಕೆ ಉದ್ಯೋಗಕ್ಕಾಗಿ ಹೋದವರು

ಬೆಂಗಳೂರು:ಮೇ 30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ