``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ

ಉಡುಪಿ:ನಗರಸಭೆ ಮತ್ತು ಉಡುಪಿ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಹಣ ಕೆರೆ ಅಭಿವೃದ್ಧಿಗೆಂದೆ ಮೀಸಲಾಗಿರುವ ಅನುದಾನದಲ್ಲಿ ಸುಮಾರು ಅಂದಾಜು60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆ ಮುನ್ನಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು

ನವದೆಹಲಿ: 18ನೇ ಲೋಕಸಭೆ ಸ್ಪೀಕರ್ ಸ್ಥಾನಕ್ಕಾಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಇಂಡಿಯಾ ಬಣದ ಅಭ್ಯರ್ಥಿ ಕೋಡಿಕುನ್ನಿಲ್ ಸುರೇಶ್ ನಡುವೆ ಪೈಪೋಟಿಯನ್ನು ಕಾಣಬಹುದಾಗಿದೆ. ಉಪ ಸ್ಪೀಕರ್ ಸ್ಥಾನವನ್ನು ಬಿಟ್ಟುಕೊಡುವುದಾಗಿ ಎನ್ ಡಿಎ ಭರವಸೆ ನೀಡದ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಸಂಸತ್

ದೆಹಲಿಯಲ್ಲಿನ ನೀರಿನ ಕೊರತೆಯ ಕುರಿತು ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದ ಜಲಸಚಿವ ಅತಿಶಿ ಅವರು ಐದನೇ ದಿನವಾದ ಮಂಗಳವಾರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮುಂಜಾನೆ ಅವರ ಆರೋಗ್ಯ ಹದಗೆಟ್ಟ ನಂತರ ಅತಿಶಿ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ

ಬೆಂಗಳೂರು, ಜೂನ್.25: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಪೂರ್ವಭಾವಿ ಸಭೆ ನಡೆದಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್‌ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ

ಮಂಗಳೂರು, ಜೂನ್.25: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ

T20 World Cup 2024: ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.ಈ ಬಾರಿಯ

ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್