ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ

ಉಡುಪಿ ಪರ್ಯಾಯಕ್ಕೆ ಬೇಕಾಗಿದೆ ವಾಹನ ನಿಲುಗಡೆ, ಬ೦ದ ಪ್ರವಾಸಿಗರಿಗೆ ನಿಲ್ಲುವ ವ್ಯವಸ್ಥೆ, ಕುಡಿಯುವ ಶುದ್ಧ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಶುಚಿತ್ವದ ವ್ಯವಸ್ಥೆಯನ್ನು ಮಾಡುವ ವ್ಯವಸ್ಥೆ ಈ ಬಾರಿ ಜಿಲ್ಲಾಡಳಿತ ಹಾಗೂ ನಗರಸಭೆಯ ಪೌರಯುಕ್ತರ ಮೇಲೆ ಹೊರೆಯಾಗಲಿದೆ. ಈ ಸ೦ದರ್ಭದಲ್ಲಿ ವಾಹನಗಳ ಸುಗಮ ಸ೦ಚಾರದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯು

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ. ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ, ಡಿವೈಎಸ್‌ಪಿ ಎಸ್‌.ವೈ.ಮೋಹನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಹಾಗೂ ನಕಲಿ ದಾಖಲೆಗಳ ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌ ಪುತ್ರಿ ಕಲ್ಪಜ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ದಶಕಗಳಷ್ಟು ಹಳೆಯ ನರೇಗಾ ಯೋಜನೆ ಬದಲಿಗೆ ಜಿ ರಾಮ್ ಜಿ ಮಸೂದೆಯನ್ನು ಮಂಡಿಸಿ ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಸಹ ಸಿಕ್ಕಿದೆ. ಈ ಬಗ್ಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಿಪಿಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್, ಕೇಂದ್ರವು ಈಗ ಕರೆನ್ಸಿ ನೋಟುಗಳಿಂದ

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ

ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ

ಸೌದಿ : ಸುಡುವ ಮರಳುಗಾಡು ಪ್ರದೇಶವಾದ ಸೌದಿ- ಯುಎಇಯಲ್ಲಿ ಹವಾಮಾನ ಬದಲಾವಣೆಯ ಕಾರಣದಿಂದಾಗಿ ಕಂಡು ಕೇಳರಿಯದ ಹಿಮಪಾತ ಉಂಟಾಗಿದೆ. ಸೌದಿ-ಯುಎಇ ಗಡಿಯಲ್ಲಿ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುವ ವಿಶಾಲವಾದ ಭೂಪ್ರದೇಶವನ್ನು ತೋರಿಸುವ ಒಂದು ಅಸಾಮಾನ್ಯ ದೃಶ್ಯದ ವೀಡಿಯೊ ವೈರಲ್ ಆಗತೊಡಗಿದೆ. X ನಲ್ಲಿ ಹಂಚಿಕೊಳ್ಳಲಾದ ಈ ಕ್ಲಿಪ್, ಬಿಳಿ ಲ್ಯಾಂಡ್ಸ್ಕೇಪ್ ಮೂಲಕ ಕಾರು

ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ