``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಸಂಸತ್ತಿನಲ್ಲಿ ಮೊದಲ ಅಧಿವೇಶನ ಆರಂಭಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಆವರಣದಲ್ಲಿ ಮಾಧ್ಯಮವನ್ನುದ್ದೇಶಿಸಿ ಸಾಂಪ್ರದಾಯಿಕ ಭಾಷಣದಲ್ಲಿ 50 ವರ್ಷಗಳ ಹಿಂದೆ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು. ಮೊದಲಿಗೆ, ತಮ್ಮ ನೇತೃತ್ವದ

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು,

ನವದೆಹಲಿ, ಜೂ.22;ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳುಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು

ಕೋಲಾರ: ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್'ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಗುವಿನ ತಾತ ಎಸ್‌ಜಿ ಅನ್ವರ್ ನೀಡಿದ ದೂರಿನ ಆಧಾರದ ಮೇಲೆ ಗೌರಿಬಿದನೂರು ಪೊಲೀಸರು ಅಮ್ಜದ್‌ನನ್ನು ಬಂಧಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ. ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ. ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ.

ಭಾರತದಿಂದ ಕರೆತಂದ ಮನೆ ಕೆಲಸದವರನ್ನು ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಬ್ರಿಟನ್‌ನ ಶ್ರೀಮಂತ ಕುಟುಂಬಗಳಲ್ಲೊಂದಾದ ಹಿಂದೂಜಾ ಕುಟುಂಬದ ನಾಲ್ವರನ್ನು ಸ್ವಿಸ್ ನ್ಯಾಯಾಲಯವೊಂದು ತಪ್ಪಿತಸ್ಥರೆಂದು ಘೋಷಿಸಿದ್ದು ನಾಲ್ಕೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಮಾನವ ಕಳ್ಳಸಾಗಣೆ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಜಿನೀವಾ ಸರೋವರದಲ್ಲಿರುವ ಹಿಂದೂಜಾ ಕುಟುಂಬದ ಬಂಗಲೆಯಲ್ಲಿ ಈ ಘಟನೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್​ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.