ಬ್ಯಾಂಕಾಕ್: ಥೈಲ್ಯಾಂಡ್ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ
ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಕ್ಕಳನ್ನು 2 ವರ್ಷದ ವರ್ಷಾ ಹಾಗೂ 4 ವರ್ಷದ ಭಾನು ಎಂದು ಗುರುತಿಸಲಾಗಿದೆ. ಹೆಣ್ಣೂರು ಸಂಚಾರಿ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ ಗೂ ಅಧಿಕ ಮಂದಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಇದೇ ಫೆಬ್ರವರಿ 12 ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು,
ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು
ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಸೇರಿದಂತೆ ಹತ್ತು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಎಂದು ನಂಬಲಾದವನ ಮನೆಯಲ್ಲಿ ಇನ್ನೂ ಇಬ್ಬರು ಮೃತಪಟ್ಟಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಇಪ್ಪತ್ತೇಳು ಜನರು ಗಾಯಗೊಂಡಿದ್ದಾರೆ, ಇದರಲ್ಲಿ ಇಬ್ಬರು ಗಂಭೀರ ಗಾಯಗಳೊಂದಿಗೆ 25 ಮಂದಿ ಜೀವಕ್ಕೆ ಅಪಾಯಕಾರಿಯಲ್ಲದ ಗಾಯಗಳೊಂದಿಗೆ ಇದ್ದಾರೆ ಎಂದು
ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ
ಬೆಂಗಳೂರು:ಫೆ. 07.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು
ಪಾಟ್ನಾ: 1995ರ ಪಾಟ್ನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಡರಾತ್ರಿ ಪಪ್ಪು ಯಾದವ್ ಎಂದೂ ಕರೆಯಲ್ಪಡುವ ಪೂರ್ಣಿಯಾ ಸಂಸದ ರಾಜೇಶ್ ರಂಜನ್ ಅವರನ್ನು ಬಂಧಿಸಲಾಗಿದ್ದು, ನಂತರ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಶನಿವಾರ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಲಾಗಿದೆ. ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ
ಸೊಲ್ಲಾಪುರ: ಬೆಂಗಳೂರು ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಘಟನೆ ಬೆನ್ನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು ಕಂಡಿದ್ದಾರೆ. ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ (59) ಅವರು 17 ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್ಮೆಂಟ್ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ. ಮಧ್ಯಾಹ್ನದ
ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ರಿತು ತಾವಡೆ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ.