ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ: ಮಾನ್ಯ ಪೇಜಾವರ ಮಠದೀಶರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರದ ಹಾಗೂ ಕೇಂದ್ರ ಸರಕಾರ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿಯವರು ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟು ಮಾಡುವಂತಹ ಹೇಳಿಕೆಯನ್ನು ನೀಡುತ್ತಿದ್ದು ಇದು ಮಧ್ವಾಚಾರ್ಯರ ಪೀಠದಲ್ಲಿ ಕುಳಿತುಕೊಳ್ಳುವಂತ ಸ್ವಾಮೀಜಿಯವರಿಗೆ ಶೋಭೆ ತರುವಂತದ್ದಲ್ಲ

ಭಾರೀ ಮಳೆ ಹಿನ್ನೆಲೆ ನೇಪಾಳದಲ್ಲಿ ಗುಡ್ಡ ಕುಸಿತದ ಪರಿಣಾಮ ಮುಕ್ತಿನಾಥ ದೇವಾಲಯಕ್ಕೆ ತೆರಳಿದ್ದ ಕನ್ನಡಿಗ ಯಾತ್ರಾರ್ಥಿಗಳು ರಸ್ತೆ ಮಧ್ಯೆ ಸಿಲುಕಿಕೊಗೊಂಡ ಘಟನೆ ನಡೆದಿದೆ. ಭಾರೀ ಮಳೆಗೆ ನೇಪಾಳದಲ್ಲಿ ಗುಡ್ಡ ಬಂಡೆಗಳು ಕುಸಿದಿವೆ. 50 ಮಂದಿ ಯಾತ್ರಾರ್ಥಿಗಳು ಎರಡು ದಿನದ ಹಿಂದೆ ಬೆಂಗಳೂರಿನಿಂದ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ತೆರಳಿದ್ದರು. ಗುಡ್ಡ ಕುಸಿದ

ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ

ಬೆಂಗಳೂರು : ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ

ಚೆನ್ನೈ: ತಮಿಳುನಾಡು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪ್ರಾಮಾಣಿಕ, ವಿದ್ಯಾವಂತ ಮತ್ತು ದೇಶಭಕ್ತ ವ್ಯಕ್ತಿಯಾಗಿದ್ದಾರೆ. ಸಾರ್ವಜನಿಕರು ಅವರನ್ನು ಬೆಂಬಲಿಸದಿದ್ದರೆ ಅವರಂತಹ ಬೇರೆ ಯಾವ ನಾಯಕನೂ ರಾಜಕೀಯಕ್ಕೆ ಸೇರಲು ಬಯಸುವುದಿಲ್ಲ. ಕೇಜ್ರಿವಾಲ್ ಅವರು ಆಳವಾದ

ದೆಹಲಿ, ಜು.6: ಜುಲೈ 22ಕ್ಕೆ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿಲಿದೆ. ಹೊಸ ಸರಕಾರದ ಪೂರ್ಣ ಬಜೆಟ್ ಮಂಡನೆ ಜುಲೈ 23ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್​​​ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಈ ಬಜೆಟ್​​ ಮೇಲಿನ ಅಧಿವೇಶನ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ

ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

ಕೋಲಾರ, ಜುಲೈ 6: ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಹಾರ್ಟ್​ ಅಟ್ಯಾಕ್​ ಆಗಿ ಸಾಯಲಿ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜನಾಥ್ ಶಾಪ ಹಾಕಿದ್ದಾರೆ. ಕೋಲಾರದಲ್ಲಿ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಣ ವರ್ಗಾವಣೆ ಆಗಿರುವುದು. ಈ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಹಗರಣದಲ್ಲಿ ಯಾರೇ

ಬೆಂಗಳೂರು, ಜುಲೈ.06: ಪ್ರತಿ SP, DCP, IGಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗೂ ಕಳೆದ ಒಂದು ವರ್ಷದಲ್ಲಿ ಕೋಮು ಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ